Thought for the day
Your page will load in ...
Close Ad X
Advertisement
English ગુજરાતી हिन्दी മലയാളം தமிழ் తెలుగు
 
Share This Story

50 ಕೋಟಿ ಪರಿಹಾರ ಕೋರಿ ಅಗ್ನಿಗೆ ನೋಟೀಸ್

Posted by:
Published: Sunday, July 4, 2010, 16:39 [IST]

Art Of Living Sends Notice To Agni Sridhar

ಬೆಂಗಳೂರು, ಜು. 4 : ಏಳು ವರ್ಷ ಕಾಲ ಅವಹೇಳನಕಾರಿ ಲೇಖನಗಳನ್ನು ತಮ್ಮ ವಿರುದ್ಧ ಪ್ರಕಟಿಸಿದ್ದಕ್ಕಾಗಿ ಬೇಷರತ್ ಕ್ಷಮೆ ಕೇಳದಿದ್ದರೆ 50 ಕೋಟಿ ರು. ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ 'ಅಗ್ನಿ' ಪತ್ರಿಕೆಯ ಸಂಪಾದಕ ಶ್ರೀಧರ್ ಅವರಿಗೆ ನೋಟೀಸ್ ಕಳಿಸಿದೆ.

ಆರ್ಟ್ ಆಫ್ ಲಿವಿಂಗ್ ಆಶ್ರಮದ ಪರ ವಕಾಲತ್ತು ವಹಿಸಿರುವ ವಕೀಲ ದೊರೈರಾಜು ಅವರು ಶ್ರೀಧರ್ ಅವರಿಗೆ ನೋಟೀಸ್ ಕಳಿಸಿದ್ದಾರೆ. ನೋಟೀಸ್ ಬಂದಿರುವುದನ್ನು 'ಅಗ್ನಿ' ಶ್ರೀಧರ್ ದೃಢಪಡಿಸಿದ್ದು, ತಕ್ಕ ಉತ್ತರ ನೀಡುವುದಾಗಿ ಹೇಳಿದ್ದಾರೆ.

ಕೆಲ ಕಾಲಗಳಿಂದ ಅಗ್ನಿ ಪತ್ರಿಕೆ ಮತ್ತು ಆರ್ಟ್ ಆಫ್ ಲಿವಿಂಗ್ ನಡುವೆ ನಡೆಯುತ್ತಿರುವ ಜಟಾಪಟಿ ಈಗ ನ್ಯಾಯಾಲಯದ ಮೆಟ್ಟಲೇರುವ ಹಂತ ತಲುಪಿದೆ. ಆರ್ಟ್ ಆಫ್ ಲಿವಿಂಗ್ ನ ಸ್ವಾಮೀಜಿ ಶ್ರೀಶ್ರೀ ರವಿಶಂಕರ್ ಗುರೂಜಿ ಭೂಗಳ್ಳತನ ಮಾಡಿದ್ದಾರೆ ಎಂದು ಶ್ರೀಧರ್ ಆರೋಪಿಸಿದ್ದರು. ಶ್ರೀಧರ್ ತಮಗೆ ಫೋನ್ ಮಾಡಿ ಬೆದರಿಕೆ ಒಡ್ಡಿದ್ದರು. ತಮ್ಮಲ್ಲಿ ದಾಖಲೆಗಳಿದ್ದು ಕೇಳಿದಷ್ಟು ಹಣ ನೀಡದಿದ್ದರೆ ಎಲ್ಲ ಬಹಿರಂಗಪಡಿಸುವುದಾಗಿ ಹೆದರಿಸುತ್ತಿದ್ದಾರೆ ಎಂದು ಗುರೂಜಿ ಆರೋಪಿಸಿದ್ದರು.

ನೋಟೀಸಿನಲ್ಲಿ ತಮ್ಮ ವಿರುದ್ಧ ಕಳೆದ ಏಳು ವರ್ಷಗಳಿಂದ ಮಾಡಲಾಗಿರುವ ಎಲ್ಲ ಆರೋಪಗಳಿಗೆ ಆಡಿಯೋ ಅಥವಾ ವಿಡಿಯೋ ಸಾಕ್ಷ್ಯಗಳನ್ನ ಒದಗಿಸಬೇಕು. ಅಥವಾ ಮುಖಪುಟದಲ್ಲಿ ತಪ್ಪು ಒಪ್ಪಿಕೊಂಡು ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ 50 ಕೋಟಿ ರು. ಪರಿಹಾರ ಕೋರಿ ದಾವೆ ಹೂಡುವುದಾಗಿ ಆರ್ಟ್ ಆಫ್ ಲಿವಿಂಗ್ ನೀಡಿರುವ ನೋಟೀಸಿನಲ್ಲಿ ತಿಳಿಸಲಾಗಿದೆ.

ಅಭಿಪ್ರಾಯ ಬರೆಯಿರಿ
Click here to type in Kannada
Subscribe Newsletter