ಪುತ್ತೂರಾಯರೂ ಸೇರಿ 10 ಮಂದಿಗೆ ನುಡಿಸಿರಿ ಗೌರವ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010 ಅಕ್ಟೋಬರ್ ತಿಂಗಳ 29, 30 ಮತ್ತು 31ರಂದು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿದ್ದು ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ
ಡಾ.ಜಿ.ಎಸ್ ಅಮೂರ (ಸಾಹಿತ್ಯ), ಡಾ.ಎಂ.ವೀರಪ್ಪ ಮೊಯಿಲಿ (ಸಮಾಜಸೇವೆ), ಡಾ.ಎಂ.ಎಂ.ಕಲಬುರ್ಗಿ(ಸಂಶೋಧನೆ), ಸಂತೋಷ ಕುಮಾರ್ ಗುಲ್ವಾಡಿ (ಮಾಧ್ಯಮ), ಡಾ.ಶಿವಮೊಗ್ಗ ಸುಬ್ಬಣ್ಣ (ಸುಗಮ ಸಂಗೀತ), ಡಾ.ಬಲಿಪ ನಾರಾಯಣ ಭಾಗವತರು (ಯಕ್ಷಗಾನ), ಡಾ.ಎಂ.ಲೀಲಾವತಿ (ಚಲನಚಿತ್ರ), ಪ್ರೊ.ಬಿ.ಜಯಪ್ರಕಾಶ ಗೌಡ (ಸಂಘಟನೆ), ಡಾ.ಬ್ರ.ಕು.ಬಸವರಾಜ ರಾಜಋಷಿ(ಅಧ್ಯಾತ್ಮ), ಡಾ.ಕೆ.ಪಿ.ಪುತ್ತೂರಾಯ(ಸಾಹಿತ್ಯ)ಇವರುಗಳು ಈ ಬಾರಿಯ ನುಡಿಸಿರಿ ಪ್ರಶಸ್ತಿ ಪುರಸ್ಕೃತರು. ಪ್ರಶಸ್ತಿಯು 10ಸಾವಿರ ನಗದು, ಮಾನಪತ್ರ, ಸ್ಮರಣಿಕೆ, ಶಾಲು, ಫಲಪುಷ್ಪ ಗೌರವಗಳನ್ನೊಳಗೊಂಡಿದೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS