ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್ ಯಡಿಯೂರಪ್ಪ ಅಪರಾಧಿಯಲ್ಲ - ಪೇಜಾವರ ಶ್ರೀ

|
Google Oneindia Kannada News

Udupi Pejavar Seer
ಚಿಂತಾಮಣಿ, ನ. 4: ಯಡಿಯೂರಪ್ಪನವರು ಇಂತಹ ಪರಿಸ್ಥಿತಿಯನ್ನು ನಿರ್ಮಿಸಿಕೊಳ್ಳಬಾರದಾಗಿತ್ತು. ನ್ಯಾಯಾಲಯದ ಅಂತಿಮ ತೀರ್ಪು ಬರುವ ಮುನ್ನವೇ ಯಡಿಯೂರಪ್ಪ ಅವರನ್ನು ಅಪರಾಧಿ ಎಂದು ಬಿಂಬಿಸುವುದು ಸರಿಯಲ್ಲ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಮೇಲ್ನೋಟಕ್ಕ ಅವರ ಮೇಲೆ ಆರೋಪ ಸಾಬೀತಾಗಿದ್ದರೂ ನ್ಯಾಯಾಲಯದ ಅಂತಿಮ ತೀರ್ಪು ಬರುವ ತನಕ ಎಲ್ಲರೂ ಸಾವಧಾನದಿಂದ ಕಾಯಬೇಕಾಗುತ್ತದೆ. ನ್ಯಾಯಾಲಯದ ಮುಂದೆ ಎಲ್ಲರೂ ಒಂದೇ. ಯಾರು ಏನೇನು ಅನುಭವಿಸಬೇಕೆನ್ನುವುದು ವಿಧಿ ನಿಯಮ. ಹಾಗಾಗಿ ಕೋರ್ಟಿನ ಅಂತಿಮ ತೀರ್ಮಾನ ಹೊರಬೀಳುವ ಮುನ್ನ ಯಡಿಯೂರಪ ಅವರನ್ನು ಅಪರಾಧಿಯೆಂದು ಬಿಂಬಿಸುವುದು ಸರಿಯಲ್ಲ ಎಂದು ಶ್ರೀಗಳು ಹೇಳಿಕೆ ನೀಡಿದ್ದಾರೆ.

ಇಲ್ಲಿನ ರಾಯಲ್ ವಿದ್ಯಾಭವನದಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡುತ್ತಾ ಮಾತನಾಡಿದ ಪೇಜಾವರ, ಚುನಾವಣೆಯ ಸಂದರ್ಭದಲ್ಲಿ ಆರಂಭವಾಗುವ ಭ್ರಷ್ಟಾಚಾರ ಪಕ್ಷಗಳು ಅಧಿಕಾರಕ್ಕೆ ಬಂದ ಮೇಲೂ ಮುಂದುವರಿಯುತ್ತಿರುವುದು ನೋವಿನ ಸಂಗತಿ. ಇಂದು ನಾವೆಲ್ಲಾ ಅನುಭವಿಸುತ್ತಿರುವ ರಾಜಕೀಯ ಅವ್ಯವಸ್ಥೆಗೆ ಭ್ರಷ್ಟಾಚಾರವೇ ಮೂಲ ಕಾರಣ ಎಂದು ವಿಷಾದ ವ್ಯಕ್ತಪಡಿಸಿದರು.

English summary
Ex- Cm of Karnataka BS Yeddyurappa digged his own grave by involving in a mess. However, just because he is arrested doesnt mean he is a culprit. Opinions Udupi pejavara Seer in Chintamani, Kolara Dist
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X