•  

ನ್ಯಾ ಸುಧೀಂದ್ರರಾವ್ ಟೀಕಿಸಿದ್ದ ಚಂದ್ರೇಗೌಡರಿಗೆ ನೋಟಿಸ್

ಬುಧವಾರ, ಫೆಬ್ರವರಿ 1, 2012, 11:21 [IST]
high-court-issues-lokayukta-contempt-notice-dbc
ಬೆಂಗಳೂರು, ಫೆ.1: ಲೋಕಾಯುಕ್ತ ವಿಶೇಷ ಕೋರ್ಟ್ ನ್ಯಾಯಾಧೀಶ ಎನ್ ಕೆ ಸುಧೀಂದ್ರ ರಾವ್ ಅವರ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಡಿಬಿ ಚಂದ್ರೇಗೌಡ ಅವರ ವಿರುದ್ಧ ನ್ಯಾಯಾಂಗ ನಿಂದನೆಯ ಕ್ರಿಮಿನಲ್ ಮೊಕದ್ದಮೆ ಹೈಕೋರ್ಟಿನಲ್ಲಿ ಮಂಗಳವಾರ ದಾಖಲಾಗಿದೆ.

ಇವರ ಹೇಳಿಕೆಯನ್ನು ಪ್ರಕಟಿಸಿರುವ ಕನ್ನಡ ಪ್ರಭ ದಿನಪತ್ರಿಕೆಯ ವಿರುದ್ಧವೂ ಮೊಕದ್ದಮೆ ದಾಖಲಾಗಿದೆ. ಇಬ್ಬರಿಗೂ ನೋಟಿಸ್ ನೀಡುವಂತೆ ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ಆದೇಶಿಸಿದ್ದಾರೆ. ಫೆಬ್ರವರಿ 21 ರೊಳಗಾಗಿ ಉತ್ತರ ನೀಡಬೇಕಾಗಿದೆ.

ಭೂಹಗರಣ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಜಾಮೀನು ನೀಡಲು ನ್ಯಾ ಸುಧೀಂದ್ರರಾವ್ ನಿರಾಕರಿಸಿದ್ದರು. ಆ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಚಂದ್ರೇಗೌಡರು ನ್ಯಾ ಸುಧೀಂದ್ರರಾವ್ ವಿರುದ್ಧ ಹೇಳಿಕೆ ನೀಡಿದ್ದರು.

'ಇದು ನ್ಯಾಯಾಂಗ ನಿಂದನೆ ಆಗುತ್ತದೆಯಲ್ಲವೇ?' ಎಂದು ಪತ್ರಕರ್ತರೊಬ್ಬರು ಎಚ್ಚರಿಸುವ ದನಿಯಲ್ಲಿ ಗೌಡರನ್ನು ಪ್ರಶ್ನಿಸಿದ್ದರು. ಅದಕ್ಕೆ ಸನ್ಮಾನ್ಯ ಚಂದ್ರೇಗೌಡರು 'ನಾನು ಕೂಡ ಕಾನೂನು ಇಲಾಖೆಯ ಮಾಜಿ ಸಚಿವ. ಏನು ಹೇಳಬೇಕು ಎಂಬುದು ನನಗೆ ಗೊತ್ತಿದೆ. ಏನೇ ಬಂದರೂ ಅದನ್ನು ಎದುರಿಸಲು ಸಿದ್ಧ' ಎಂದಿದ್ದರು.

ತಮ್ಮ ವಿರುದ್ಧ ಈ ರೀತಿ ಹೇಳಿಕೆ ನೀಡುವ ಮೂಲಕ ನ್ಯಾಯಾಂಗದ ಘನತೆಗೆ ಚಂದ್ರೇಗೌಡ ಅವರು ಚ್ಯುತಿ ಉಂಟುಮಾಡಿದ್ದಾರೆ. ತಮ್ಮ ವಿರುದ್ಧ ವೃಥಾ ಆರೋಪ ಮಾಡಿದ್ದಾರೆ, ಇದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ನ್ಯಾ ಸುಧೀಂದ್ರರಾವ್ ಅವರು ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ನ್ಯಾಯಾಂಗ ನಿಂದನೆ (ಕ್ರಿಮಿನಲ್) ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

User Comments
nimmava 01 Feb 2012 01:31 pm
ಚಂದ್ರೆ ಗೌಡರು ಹೇಳಿದ್ದು ಸತ್ಯವಾದ ಮಾತು . ಹೆದರಬೇಡಿ ಗೌಡರೆ ..ನಿಮ್ಮ ಜೊತೆ ಕರ್ನಾಟಕದ ಜನತೆ ಇದೆ .
[ ಅಭಿಪ್ರಾಯ ಬರೆಯಿರಿ ]
   
1st Test , Lord's Cricket Ground, St John's Wood
England won by 5 wickets
Follow Oneindia Kannada on Twitter
Oneindia Kannada Facebook fan page
Write Comments on this Article