ನಾಗರಿಕ ಸೇವಾ ಖಾತರಿ ಕಾಯ್ದೆ-ಸಕಾಲ ಜಾರಿ
ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಈ ಮಹತ್ವಾಕಾಂಕ್ಷಿ ಯೋಜನೆಗೆ ಸೋಮವಾರ(ಏ.2) ಚಾಲನೆ ನೀಡಿದರು. ನಾಗರಿಕರಿಗೆ ವಿಳಂಬಯಿಲ್ಲದೆ ಸರ್ಕಾರಿ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಸರ್ಕಾರ ಯೋಜನೆ ಇದಾಗಿದೆ.
ನಾಗರಿಕರಿಗೆ ವಿವಿಧ ರೀತಿಯ ಸೇವೆಗಳನ್ನು ಪೂರೈಸುವ 11 ಇಲಾಖೆ-ಕಂದಾಯ, ಶಿಕ್ಷಣ, ಆರ್ಥಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ಥಳೀಯ ಸಂಸ್ಥೆಗಳು, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ ಮತ್ತು ಆರೋಗ್ಯ ಇಲಾಖೆಗಳ ಒಟ್ಟು 151 ಸೇವೆಗಳನ್ನು ಈ ಕಾಯ್ದೆಯ ವ್ಯಾಪ್ತಿಯಲ್ಲಿ ತರಲಾಗಿದೆ.
ಅರ್ಜಿ ಸಲ್ಲಿಸುವುದು ಸುಲಭ: ವಿವಿಧ ಇಲಾಖೆಗಳಲ್ಲಿ ಸೇವೆಯನ್ನು ಪಡೆಯಲು ಬಯಸುವ ನಾಗರಿಕರು ಸಂಬಂಧಿತ ದಾಖಲೆಗಳು ಮತ್ತು ನಿಗದಿಪಡಿಸಿದ ಶುಲ್ಕದೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಕೂಡಲೆ ಅವರಿಗೊಂದು ರಸೀದಿ ನೀಡಲಾಗುತ್ತದೆ. ಈ ರಸೀದಿಯಲ್ಲಿ 15 ಅಂಕಿಗಳ ಗುರುತಿನ ಸಂಖ್ಯೆಯೊಂದನ್ನು ಗ್ರಾಹಕರಿಗೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಕೂಡಲೆ ನಾಗರಿಕರು ರಸೀದಿ ಪಡೆಯುವುದು ಕಡ್ಡಾಯವಾಗಿರುತ್ತದೆ.
ಸೇವೆ ಟ್ರ್ಯಾಕ್ ಮಾಡಿ: ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ನೀಡಿದಲ್ಲಿ ಅವರಿಗೆ ಎಸ್ಎಂಎಸ್ ಮೂಲಕ ಅರ್ಜಿಯ ಪ್ರಗತಿಯ ಕುರಿತು ವರದಿ ದೊರಕುತ್ತದೆ. ಮೊಬೈಲ್ ಇಲ್ಲದಿದ್ದಲ್ಲಿ ಅರ್ಜಿದಾರರು ವೆಬ್ ಸೈಟ್ ಮೂಲಕ ತಮ್ಮ ಅರ್ಜಿಯ ಪ್ರಗತಿಯನ್ನು ಪರಿಶೀಲಿಸಬಹುದಾಗಿದೆ.
ಅಥವಾ ಸಕಾಲ ದ ಕಾಲ್ ಸೆಂಟರ್ ಗೆ ಕರೆಮಾಡಿ ಅರ್ಜಿ ಪ್ರಗತಿ ಬಗ್ಗೆ ವಿವರ ಪಡೆಯಬಹುದು.
ಸಂಪರ್ಕ
ವಿಳಾಸ
:
ದೂರವಾಣಿ
ಸಂಖ್ಯೆ
080-44554455
ಗೆ
ಕರೆಮಾಡಿ
*
ಈ
ಕಾಯ್ದೆಯ
ವೆಬ್
ವಿಳಾಸ
www.sakala.kar.nic.in
*
ಇ-ಮೇಲ್
ವಿಳಾಸ
[email protected]
ಅಂತರ್ಜಾಲ ಮುಖಾಂತರವೂ ಸಾರ್ವಜನಿಕರು ಈ ಕಾಯ್ದೆಯ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಈ ಪ್ರಗತಿ ಪರಿಶೀಲನೆ ಮತ್ತಿತರ ಎಲ್ಲ ಪ್ರಕ್ರಿಯೆಗಳಿಗೂ ಗ್ರಾಹಕರಿಗೆ ಸ್ವೀಕೃತಿಯಲ್ಲಿ ನೀಡಿದ 15 ಅಂಕಿಯ ಗುರುತಿನ ಸಂಖ್ಯೆಯನ್ನೇ ಬಳಸಬೇಕಾಗಿರುತ್ತದೆ.
ಸೇವೆ ವಿಫಲವಾದರೆ ದಂಡ : ಪ್ರತಿದಿನ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳ ಮಾಹಿತಿಯನ್ನು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಪಡೆಯಲಾಗುವುದು. ಸೇವೆ ನೀಡುವಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳು ದಂಡ ಪಾವತಿಸಬೇಕಾಗುತ್ತದೆ.
ದಂಡ ವಿವರ: ನಾಗರಿಕರಿಗೆ ಸೇವೆಯನ್ನು ಪೂರೈಸುವುದರಲ್ಲಿ ವಿಳಂಬವಾದರೆ ವಿಳಂಬಿತ ಅವಧಿಯಲ್ಲಿ ಪ್ರತಿದಿನಕ್ಕೆ 20-00 ರು.ನಂತೆ ಗರಿಷ್ಠ 500 ರು.ಗಳ ಮಿತಿಯವರೆಗೆ ಸಂಬಂಧಿತ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಪರಿಹಾರ ಶುಲ್ಕ ನೀಡಬೇಕಿದೆ.
ಇಲ್ಲಿಯವರೆಗೆ ಈ ಕಾಯ್ದೆಯ ಅಡಿ ಎಲ್ಲಾ ಇಲಾಖೆಗಳಲ್ಲಿಯೂ ಒಟ್ಟಾಗಿ 1,32,304 ಅರ್ಜಿಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 1,12,439 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. [ಲಾಂಛನ ಸೃಷ್ಟಿಸಿದ ಬಾಲಸ್ವಾಮಿ]