Thought for the day
Your page will load in ...
Close Ad X
Advertisement
English ગુજરાતી हिन्दी മലയാളം தமிழ் తెలుగు
 
Share This Story

ಡೀಸೆಲ್ ಬೆಲೆಏರಿಕೆಗೆ ಹೆಬ್ಬೆರಳೆತ್ತಿದ ಪ್ರಧಾನಿ ಸಿಂಗ್

Written by:
Published: Saturday, September 15, 2012, 13:06 [IST]

 Manmohan Singh Defends Diesel Price Hike

ನವದೆಹಲಿ, ಸೆ. 15 : ಏರಿಸಿದ ಡೀಸೆಲ್ ಬೆಲೆ ಇಳಿಸಲು ಯುಪಿಎ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ ಡೆಡ್‌ಲೈನ್ ನೀಡಿದ್ದರೂ ತಲೆಕೆಡಿಸಿಕೊಳ್ಳದ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು, ಡೀಸೆಲ್ ಬೆಲೆ ಏರಿಕೆಯನ್ನು ಶನಿವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಸರಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದು, ಸಂಕಷ್ಟದಲ್ಲಿರುವ ದೇಶದ ಆರ್ಥಿಕ ಪರಿಸ್ಥಿತಿ, ಪ್ರಸ್ತುತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಚೇತರಿಕೆ ಕಾಣುವ ವಿಶ್ವಾಸವಿದೆ, ಹಣದುಬ್ಬರ ನಿಯಂತ್ರಣಕ್ಕೆ ಬರಲಿದೆ ಎಂದು ಅವರು ಹೇಳಿರುವುದು ವಿರೋಧ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ಸನ್ನು ಮತ್ತಷ್ಟು ಕೆರಳಿಸುವ ಸಾಧ್ಯತೆಯಿದೆ.

12ನೇ ಪಂಚವಾರ್ಷಿಕ ಯೋಜನೆಯ ದಾಖಲಾತಿಯನ್ನು ಅನುಮತಿ ನೀಡಲು ಶನಿವಾರ ಕರೆಯಲಾಗಿದ್ದ ಯೋಜನಾ ಆಯೋಗದ ಸಭೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ, "ಡೀಸೆಲ್ ಬೆಲೆಯನ್ನು ಏರಿಸಿ ಕೇಂದ್ರ ಸರಕಾರ ದೇಶದ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ" ಎಂದರು.

ಭಾರತ ಇಂಧನ ಕೊರತೆ ಎದುರಿಸುತ್ತಿರುವುದನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ ಮನಮೋಹನ ಸಿಂಗ್ ಅವರು, ದೇಶದ ಇಂಧನ ನೀತಿಯನ್ನು ಮರುಪರಿಶೀಲಿಸುವ ಅಗತ್ಯವಿದೆ. ನಾವು ಇಂಧನ ಕೊರತೆ ಎದುರಿಸುತ್ತಿದ್ದೇವೆ, ಆಮದು ಅವಲಂಬನೆ ಹೆಚ್ಚಾಗುತ್ತಿದೆ. ಇಂಧನ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಮಿತವ್ಯಯವಾಗಿ ಬಳಸುವ ನಿಟ್ಟಿನಲ್ಲಿ ನಾವು ಚಿಂತಿಸಬೇಕಿದೆ ಎಂದು ನುಡಿದರು.

ಸೆಪ್ಟೆಂಬರ್ 13ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಡೀಸೆಲ್ ಬೆಲೆಯನ್ನು ಲೀಟರಿಗೆ 5 ರು.ನಷ್ಟು ಸರಕಾರ ಏರಿಸಿದೆ. ಗೃಹ ಅಡುಗೆ ಅನಿಲ ಸಿಲಿಂಡರ್ ಬಳಕೆಯನ್ನು ಕೂಡ ವರ್ಷಕ್ಕೆ 6ಕ್ಕೆ ಮಿತಿಗೊಳಿಸಿದೆ. ಪೆಟ್ರೋಲ್ ಬೆಲೆ ಏರಿಕೆಗೆ ಕೂಡ ಸಮ್ಮತಿ ನೀಡುವ ಲಕ್ಷಣಗಳಿವೆ. ಈ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ ಅನಿರ್ದಿಷ್ಟ ಕಾಲ ಮುಷ್ಕರ ಹೂಡುವುದಾಗಿ ಕರ್ನಾಟಕದ ಲಾರಿ ಮಾಲಿಕರ ಸಂಘ ಬೆದರಿಕೆಯೊಡ್ಡಿದೆ.

ಪ್ರವೇಶ ತೆರಿಗೆ ಕರ್ನಾಟಕದಲ್ಲಿ ಅಧಿಕವಿರುವುದರಿಂದ ಬೆಲೆ ಏರಿಕೆಯ ಪ್ರಮಾಣವೂ ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಅಧಿಕವಾಗಿದೆ. ಪ್ರಸ್ತುತ, ಬೆಂಗಳೂರಿನಲ್ಲಿ ಡೀಸೆಲ್ ಬೆಲೆ 6.13 ರು.ನಷ್ಟು ಏರಿಕೆಯಾಗಿದ್ದು, ಲೀಟರಿಗೆ 51.24 ರು. ಬೆಲೆಗೆ ಮಾರಾಟವಾಗುತ್ತಿದೆ.

English summary
Prime Minister of India Dr. Manmohan Singh has strongly defended the Diesel price hike, stating central govt has taken the right decision and hoped that the economy would bounce back in the second half of fiscal year. But, Trinmool Congress has asked the UPA to rollback the price hike.
ಅಭಿಪ್ರಾಯ ಬರೆಯಿರಿ
Click here to type in Kannada
Subscribe Newsletter
IPL, Rajiv Gandhi International Stadium, Uppal, Hyderabad
Sunrisers won by 5 wickets
IPL, Subrata Roy Sahara Stadium, Gahunje
Pune Warriors won by 38 runs
1st Test , Lord's Cricket Ground, St John's Wood
England won by 170 runs