Thought for the day
Your page will load in ...
Close Ad X
Advertisement
English ગુજરાતી हिन्दी മലയാളം தமிழ் తెలుగు
 
Share This Story

ನಿತ್ಯಾನಂದನ ಕಣ್ಣು ಮಹಾಲಿಂಗೇಶ್ವರ ಮಠದ ಮ್ಯಾಲ

Posted by:
Updated: Tuesday, March 5, 2013, 17:20 [IST]

 Nithyananda Rakes Up Another Controversy

ಬೆಂಗಳೂರು, ಮಾ. 5 : "ನನಗೂ ನಿತ್ಯಾನಂದನಿಗೂ ಯಾವುದೇ ಸಂಬಂಧವಿಲ್ಲ. ಆತ ಯಾರೆಂದೇ ನನಗೆ ಗೊತ್ತಿಲ್ಲ. ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ನನ್ನನ್ನು ನಿತ್ಯಾನಂದ ತೇಜೋವಧೆ ಮಾಡುತ್ತಿದ್ದಾನೆ. ಆತ ಹೇಳುತ್ತಿರುವುದೆಲ್ಲ ಶುದ್ಧಾತಿಶುದ್ಧ ಸುಳ್ಳು. ಸೌಜನ್ಯಕ್ಕೆ ಹೋಗಿ ಫೋಟೋ ತೆಗೆಸಿಕೊಂಡಿದ್ದರ ದುರ್ಲಾಭ ಆತ ಪಡೆಯುತ್ತಿದ್ದಾನೆ."

ಹೀಗೆಂದು ಹೇಳಿದವರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಮಹಾಲಿಂಗಪುರ ಗ್ರಾಮದಲ್ಲಿ 11ನೇ ಶತಮಾನದಲ್ಲಿ ಸ್ಥಾಪಿತವಾಗಿರುವ ಮಹಾಲಿಂಗೇಶ್ವರ ಮಠದ ಪೀಠಾಧಿಪತಿಗಳಾಗಿರುವ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು. ನಿತ್ಯಾನಂದ ನೀಡಿರುವ ಹೇಳಿಕೆ ವಿರುದ್ಧ ಶಿವಯೋಗಿ ಸ್ವಾಮೀಜಿಗಳು ತೀವ್ರ ಆಕ್ಷೇಪ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.

ಇಂಥ ಮತ್ತೊಂದು ವಿವಾದಕ್ಕೆ ಮತ್ತೆ ನಾಂದಿ ಹಾಡಿದವರು ರಾಮನಗರ ಜಿಲ್ಲೆಯಲ್ಲಿರುವ ಬಿಡದಿಯಲ್ಲಿ ಧ್ಯಾನಪೀಠಂ ಆಶ್ರಮ ನಡೆಸುತ್ತಿರುವ ವಿವಾದಾತ್ಮಕ ಸನ್ಯಾಸಿ ನಿತ್ಯಾನಂದ ಸ್ವಾಮಿ. ಮಹಾಲಿಂಗಪುರದಲ್ಲಿರುವ ಮಹಾಲಿಂಗೇಶ್ವರ ಮಠದ ಉತ್ತರಾಧಿಕಾರಿಗಬೇಕೆಂದು ತಮ್ಮನ್ನು ಶಿವಯೋಗಿ ರಾಜೇಂಜ್ರ ಸ್ವಾಮೀಜಿಗಳು ಕೇಳಿಕೊಂಡಿದ್ದಾರೆ ಎಂದು ನಿತ್ಯಾನಂದ ಹೇಳಿಕೆ ನೀಡಿರುವುದೇ ಈ ಗೊಂದಲ್ಲೆ ಕಾರಣವಾಗಿದೆ.

"ಆದಿಚುಂಚನಗಿರಿ ಶ್ರೀಗಳಾದ ಶ್ರೀ ಬಾಲಗಂಗಾಧರ ಮಹಾಸ್ವಾಮೀಜಿಯವರು ಕಾಲವಾದಾಗ ಬೆಂಗಳೂರಿಗೆ ಬಂದಿದ್ದೆ. ನನ್ನ ಸ್ನೇಹಿತರೊಬ್ಬರು ನಿತ್ಯಾನಂದನ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದು ನಿಜ. ಅಲ್ಲಿ ಆತನಿಂದ ಸನ್ಮಾನ ಸ್ವೀಕರಿಸಿದ್ದೂ ನಿಜ. ಆದರೆ ನಿತ್ಯಾನಂದ ಮತ್ತು ನನ್ನ ನಡುವೆ ಮಠಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯಾಗಲಿ ಒಪ್ಪಂದವಾಗಲಿ ನಡೆದಿಲ್ಲ. ನಿತ್ಯಾನಂದನ ಹೇಳಿಕೆ ನನಗೆ ತೀವ್ರ ಆಘಾತ ತಂದಿದೆ" ಎಂದು ಅವರು ಹೇಳಿದ್ದಾರೆ.

"ನಿಜ ಹೇಳಬೇಕೆಂದರೆ, ಆತ ಯಾರು ಎಂದೇ ನನಗೆ ಗೊತ್ತಿಲ್ಲ. ಚನ್ನಪಟ್ಟಣದ ನಾಟಿಕಾರ್ ಧರ್ಮಪ್ಪ ಎಂಬುವವರು ನನ್ನನ್ನು ಬಿಡದಿ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪೂಜೆಗೆಂದು ಕರೆದಿದ್ದರು. ಅಲ್ಲಿ 11ನೇ ಶತಮಾನದಲ್ಲಿ ಸ್ಥಾಪಿತವಾಗಿರುವ ಮಹಾಲಿಂಗೇಶ್ವರ ಮಠದ ಉತ್ತರಾಧಿಕಾರಿಯನ್ನಾಗಿ ನಿತ್ಯಾನಂದನನ್ನು ಮಾಡ್ತೀನೆಂದು ನಾನು ಖಂಡಿತ ಮಾತು ಕೊಟ್ಟಿಲ್ಲ. ಯಾವ ದಾಖಲೆಯನ್ನೂ ಆತನಿಗೆ ನೀಡಿಲ್ಲ. ಧರ್ಮ ಬಿಟ್ಟು ನಾನು ಏನನ್ನೂ ಮಾಡಿಲ್ಲ" ಎಂದು ಅವರು ಸಮಜಾಯಿಷಿ ನೀಡಲು ಯತ್ನಿಸಿದ್ದಾರೆ.

ಆದರೆ, ನಿತ್ಯಾನಂದ ತನ್ನ ಶಿಷ್ಯನೊಬ್ಬನಿಗೆ, ಮಹಾಲಿಂಗಪುರಕ್ಕೆ ಹೋಗಿ ಮಠದ ಉಸ್ತುವಾರಿ ನೋಡಿಕೊಳ್ಳಬೇಕು. ಮಹಾಲಿಂಗೇಶ್ವರ ಮಠದ ಸ್ವಾಮೀಜಿಗಳು ತನ್ನನ್ನು ಉತ್ತರಾಧಿಕಾರಿಯನ್ನಾಗಿ ಮಾಡಲು ಒಪ್ಪಿಕೊಂಡಿದ್ದಾರೆ. ಇದಕ್ಕೆ ಪುರಾವೆಯಾಗಿ ಲಿಖಿತ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದು, ಖಾಸಗಿ ವಾಹಿನಿ ಬಿತ್ತರ ಮಾಡಿರುವ ದೂರವಾಣಿ ಸಂದೇಶದಲ್ಲಿ ಬಹಿರಂಗವಾಗಿದೆ. ಈ ಹೇಳಿಕೆಯನ್ನು ಮಹಾಲಿಂಗೇಶ್ವರ ಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಈ ಸುದ್ದಿ ಹಬ್ಬುತ್ತಿದ್ದಂತೆ ಮುಧೋಳ ಮತ್ತು ಸುತ್ತಮುತ್ತಲಿನ ಲಿಂಗಾಯತ ಸಮುದಾಯದವರು ಸಿಡಿದು ನಿಂತಿದ್ದಾರೆ. ಯಾವುದೇ ಕಾರಣಕ್ಕೂ ವಿವಾದಾತ್ಮಕ ನಿತ್ಯಾನಂದ ಸ್ವಾಮಿಗೆ ಲಿಂಗಾಯತರ ಮಠವನ್ನು ಪರಭಾರೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಲ್ಲಿಯವರೆಗೆ ಬಿಡದೆ ಮಾತ್ರ ಸೀಮಿತವಾಗಿದ್ದ ನಿತ್ಯಾನಂದ ಉತ್ತರ ಕರ್ನಾಟಕದ ಮೇಲೂ ಕಣ್ಣು ಹಾಕಿರುವುದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಮುಧೋಳದ ಭಕ್ತಾದಿಗಳು ಮಠದ ಸ್ವಾಮೀಜಿ ಮೇಲೆ ಕೂಡ ಕ್ರೋಧಿತರಾಗಿದ್ದಾರೆ. ಅವರು ಸರಿಯಾಗಿದ್ದರೆ ಈ ಗೊಂದಲ ಏಕೆ ಸೃಷ್ಟಿಯಾಗುತ್ತಿತ್ತು ಎಂದು ಪ್ರಶ್ನಿಸುತ್ತಿದ್ದಾರೆ. ತಾವು ಮಾಡಿದ ತಪ್ಪಿಗೆ ಶಿವಯೋಗಿ ಸ್ವಾಮೀಜಿ ಜನರ ಕ್ಷಮೆ ಯಾಚಿಸಿದ್ದಾರೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Story first published:  Tuesday, March 5, 2013, 12:37 [IST]
English summary
Now, controversial swami Nithyananda has set his eyes on Mahalingeshwara Mutt in Jamakhandi, Bagalkot, which was established in 11th century. Nithyananda has said, he would be made in-charge of the mutt. But, mutt's Shivayogi Rajendra Swamiji has denied the rumour.
ಅಭಿಪ್ರಾಯ ಬರೆಯಿರಿ
Click here to type in Kannada
Subscribe Newsletter
    Upcoming Matches
ENG Vs NZ - 1st ODI at Lord's Cricket Ground Fri 31st May ODI
NET Vs SA - Only ODI at VRA Ground Fri 31st May ODI
ENG Vs NZ - 2nd ODI at The Ageas Bowl Sun 2nd Jun ODI