Thought for the day
Your page will load in ...
Close Ad X
Advertisement
English ગુજરાતી हिन्दी മലയാളം தமிழ் తెలుగు
 
Share This Story

ಕ್ರಿಮಿನಲ್ಸ್ ಗೆ ಟಿಕೆಟಿಲ್ಲ; ನಾನು ಸ್ಪರ್ಧಿಸೋಲ್ಲ: ಡಿವಿಎಸ್

Posted by:
Updated: Tuesday, March 5, 2013, 14:47 [IST]

 Sadananda Gowda Not To Contest Ktk Vidhan Sabha Polls

ಮಂಗಳೂರು, ಮಾ.5: ವಿಧಾನಸಭೆ ಚುನಾವಣೆಗಾಗಿ ಅಪರಾಧ ಹಿನ್ನೆಲೆಯುಳ್ಳವರಿಗೆ, ಚಾರಿತ್ರ್ಯಹೀನರಿಗೆ ಟಿಕೆಟ್ ನೀಡುವುದಿಲ್ಲ. ಸಚ್ಚಾರಿತ್ರ್ಯದವರಿಗೆ ಮಾತ್ರ ಬಿಜೆಪಿ ಪಕ್ಷದ ಟಿಕೆಟ್ ನೀಡಲಿದೆ. ಅಂದಹಾಗೆ ಮಾ 25ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಗುರುವಾರ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರಾರ್ಥ ಮಾತನಾಡಿದ ಸದಾನಂದರು ತಾವು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮಾರ್ಚ್ 11ರಂದು ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶವನ್ನು ನೋಡಿಕೊಂಡು ಮಾಜಿ ಸಿಎಂ ಸದಾನಂದರಿಗೆ ಸೂಕ್ತ ಸ್ಥಾನ ನೀಡುವ ಬಗ್ಗೆ ಪಕ್ಷ ಅಂತಿಮ ನಿರ್ಧಾರ ಕೈಗೊಳ್ಳುವ ಅಂದಾಜಿದೆ.

ರಾಜ್ಯ ಮಟ್ಟದ ಪಾಲಿಟಿಕ್ಸ್ ನಲ್ಲಿ ತಮಗೆ ಇಷ್ಟವಿಲ್ಲ ಎಂದಿರುವ ಸದಾನಂದರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಯಲ್ಲಿ ತಮಗೆ ಸೂಕ್ತ ಸ್ಥಾನ ದೊರಕುವ ಸುಳಿವನ್ನು ನೀಡಿದರು.
ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಪ್ರತಿಷ್ಠಾಪಿಸುವಾಗ ಸದಾನಂದರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ದೊರಕಿಸಿಕೊಡುವ ಭರವಸೆ ನೀಡಲಾಗಿತ್ತು.

ಆದರೆ ಇದುವರೆಗೂ ಅವರಿಗೆ ಯಾವುದೇ ಸೂಕ್ತ ಸ್ಥಾನಮಾನ ಲಭ್ಯವಾಗಿಲ್ಲ. ಆದರೆ ಚುನಾವಣೆ ಹೊಸ್ತಿಲಲ್ಲಿರುವಾಗ ಅವರಿಗೆ ಸೂಕ್ತ ಸ್ಥಾನ ಲಭಿಸಲಿದೆ. ಇತ್ತೀಚೆಗೆ ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದಾಗ, ಸದಾನಂದರಿಗೆ ಈ ಭರವಸೆ ದೊರೆತಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

Story first published:  Tuesday, March 5, 2013, 14:43 [IST]
English summary
Former Karnataka chief minister Sadananda Gowda has clarified that he wont contest in the next Karnataka Vidhan Sabha polls.
ಅಭಿಪ್ರಾಯ ಬರೆಯಿರಿ
Click here to type in Kannada
Subscribe Newsletter
    Upcoming Matches
CSK Vs MI - Qualifier 1 at Feroz Shah Kotla Tue 21st May IPL
RR Vs SUN - Eliminator at Feroz Shah Kotla Wed 22nd May IPL
IRE Vs PAK - 1st ODI at Castle Avenue Thu 23rd May ODI