ಬೆಂಗಳೂರು, ಏ.1: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ. ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ಎಚ್ ಡಿ ಕುಮಾರಸ್ವಾಮಿ ಅವರು ಲೋಕಸಭೆಗೆ ಸ್ಪರ್ಧಿಸುವ ಮೂಲಕ ಕಣಕ್ಕೆ ರಂಗು ತುಂಬಿದ್ದಾರೆ. ಕೊನೆ ಕ್ಷಣದಲ್ಲಿ ತಮ್ಮ ಕ್ಷೇತ್ರ ಬದಲಾಯಿಸಿರುವ ಕುಮಾರಸ್ವಾಮಿ ಅವರು ರಾಮನಗರದಿಂದ ಚಿಕ್ಕಬಳ್ಳಾಪುರಕ್ಕೆ ಬಂದು ನಾನು ನಿಮ್ಮೂರಿನ ಅಳಿಯ ನನಗೆ ಮತ ನೀಡಿ ಎಂದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ಸಿನಿಂದ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ, ಬಿಜೆಪಿಯಿಂದ ಮಾಜಿ ಸಚಿವ ಬಿ.ಎನ್ ಬಚ್ಚೇಗೌಡ, ಎಎಪಿಯಿಂದ ಮಾಜಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ ಅರ್ಕೇಶ್ ಸ್ಪರ್ಧೆಯಲ್ಲಿರುವ ಇತರೆ ಅಭ್ಯರ್ಥಿಗಳಾಗಿದ್ದಾರೆ.
ರಾಮನಗರ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಅವರು ಚಿಂತಾಮಣಿ ತಾಲೂಕಿನವರಾದ ಪತ್ನಿ ಅನಿತಾ ಕುಮಾರಸ್ವಾಮಿ ಅವರ ನಾಮ ಬಲ, ಜಿಲ್ಲೆಯಲ್ಲಿರುವ ಎರಡೂ ಮುಕ್ಕಾಲು ಲಕ್ಷ ಒಕ್ಕಲಿಗರ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ಸಿನಿಮಾ ರಂಗದಲ್ಲಿ ಚಿತ್ರ ನಿರ್ಮಾಣ ಮಾಡಿಕೊಂಡಿದ್ದ ಕುಮಾರಸ್ವಾಮಿ ಅವರು ಅನುಭವವಿಲ್ಲದ ಕಾಲದಲ್ಲೇ ರಾಜಕೀಯ ಪ್ರವೇಶಿಸಿ ಹಲವು ಪ್ರಥಮಗಳಿಗೆ ನಾಂದಿ ಹಾಡಿದವರು.. ಈಗ ತಂತ್ರಗಾರಿಕೆಯಲ್ಲಿ ನಿಷ್ಣಾತರಾಗಿರುವ ಕುಮಾರಸ್ವಾಮಿ ಅವರ ರಾಜಕೀಯ ಪಯಣ ಪರಿಚಯ ಇಲ್ಲಿದೆ...
1996ರಲ್ಲೇ ಲೋಕಸಭೆಗೆ ಆಯ್ಕೆಯಾಗಿದ್ದ ಎಚ್ಡಿಕೆ
* ರಾಜಕೀಯ ಅನುಭವವಿಲ್ಲದಿದ್ದರೂ 1996ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು.
* 1998ರಲ್ಲಿ ಕನಕಪುರ ಲೋಕಸಭೆ ಕ್ಷೇತ್ರದಿಂದ ಮತ್ತು 1999ರಲ್ಲಿ ಸಾತನೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು
* 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾದರು.
* ಫೆಬ್ರವರಿ 2006 ರಿಂದ ಅಕ್ಟೋಬರ್ 2007ರ ತನಕ ಮುಖ್ಯಮಂತ್ರಿಯಾಗಿ ಅಧಿಕಾರ. ಬಿಜೆಪಿ ಜತೆ 20-20 ಸರ್ಕಾರ ಸ್ಥಾಪನೆ
Please read our comments policy before posting