ಮಂಗಳವಾರ 4ಕಡೆ ನರೇಂದ್ರ ಮೋದಿ ಸಮಾವೇಶ
ಬೆಂಗಳೂರು, ಏ.8 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮಂಗಳವಾರ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ನಾಲ್ಕು ಜಿಲ್ಲೆಗಳಲ್ಲಿ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಬಿಜೆಪಿ ಬೆಂಬಲಿಸುವಂತೆ ರಾಜ್ಯದ ಜನರಿಗೆ ಮನವಿ ಮಾಡಲಿದ್ದಾರೆ.
ಮಂಗಳವಾರ
ಮಧ್ಯಾಹ್ನ
1
ಗಂಟೆಗೆ
ಕೊಪ್ಪಳ,
2.30ಕ್ಕೆ
ಬಾಗಲಕೋಟೆ,
ಸಂಜೆ
5
ಗಂಟೆಗೆ
ಮೈಸೂರು
ಹಾಗೂ
ಸಂಜೆ
6.30ಕ್ಕೆ
ಬೆಂಗಳೂರಿನಲ್ಲಿ
ನರೇಂದ್ರ
ಮೋದಿ
ಅವರ
ಸಮಾವೇಶಗಳನ್ನು
ಆಯೋಜಿಸಲಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕು ಎಂದು ಬಿಜೆಪಿ ನಾಯಕರು ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ನರೇಂದ್ರ ಮೋದಿ ಸಹ ಈಗಾಗಲೇ ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬಿಜಾಪುರ ಮುಂತಾದ ಸ್ಥಳಗಳಲ್ಲಿ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ. [ಬಿಜೆಪಿ ಚುನಾವಣೆ ಪ್ರಣಾಳಿಕೆ ಮುಖ್ಯಾಂಶಗಳು]
ಮಂಗಳವಾರ ಒಂದೇ ದಿನ ನಾಲ್ಕು ಸಮಾವೇಶ ಉದ್ದೇಶಿಸಿ ಮಾತನಾಡಲಿರುವ ಮೋದಿ, ಮುಂದಿನ ವಾರ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಿ ಮೂರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಆ ಸಮಾವೇಶದ ಸ್ಥಳಗಳು ಅಂತಿಮಗೊಂಡಿಲ್ಲ.
ಈಗಾಗಲೇ ರಾಜ್ಯದಲ್ಲಿ ಬಿಸಿಲಿನ ಜೊತೆಗೆ ಪ್ರಚಾರದ ಕಾವು ಹೆಚ್ಚಾಗಿದೆ. ಇಂದು ನರೇಂದ್ರ ಮೋದಿ, ಬುಧವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಿ ಪ್ರಚಾರ ನಡೆಸಲಿದ್ದು, ಲೋಕಸಭೆ ಚುನಾವಣೆ ಕಾವು ಮತ್ತಷ್ಟು ಹೆಚ್ಚಾಗಲಿದೆ. ಅಂದಹಾಗೆ ಸೋಮವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಕಟದ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದಾರೆ.