ಕರ್ನಾಟಕಕ್ಕೆ ಇನ್ನು ವಜುಭಾಯ್ ವಾಲಾ ರಾಜ್ಯಪಾಲರು
ಬೆಂಗಳೂರು, ಸೆ.1 : ಕರ್ನಾಟಕದ 18ನೇ ರಾಜ್ಯಪಾಲರಾಗಿ ಗುಜರಾತ್ ಮೂಲದ ವಜುಭಾಯ್ ರುಡಾಭಾಯ್ ವಾಲಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರು ವಜುಭಾಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು.
ಅಹಮದಾಬಾದ್ನಿಂದ
ಸೋಮವಾರ
ಬೆಳಗ್ಗೆ
ವಜುಭಾಯ್
ರುಡಾಭಾಯ್
ವಾಲಾ
ಅವರು
ಬೆಂಗಳೂರಿಗೆ
ಆಗಮಿಸಿದರು.
ಕೆಂಪೇಗೌಡ
ವಿಮಾನ
ನಿಲ್ದಾಣದಲ್ಲಿ
ಗೃಹ
ಸಚಿವ
ಕೆ.ಜೆ.ಜಾರ್ಜ್
ಅವರು
ವಜುಭಾಯ್
ವಾಲಾ
ಅವರನ್ನು
ಬರಮಾಡಿಕೊಂಡರು.
ಸಂಜೆ
5
ಗಂಟೆಗೆ
ರಾಜಭನಕ್ಕೆ
ಆಗಮಿಸಿದ
ಮುಖ್ಯಮಂತ್ರಿ
ಸಿದ್ದರಾಮಯ್ಯ
ನೂತನ
ರಾಜ್ಯಪಾಲರಿಗೆ
ಹೂಗುಚ್ಛ
ನೀಡಿ
ಸ್ವಾಗತ
ಕೋರಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರು ವಜುಭಾಯ್ ರುಡಾಭಾಯ್ ವಾಲಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ವಜುಭಾಯ್ ಅವರು ಕರ್ನಾಟಕದ 18ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. [ರಾಜ್ಯಪಾಲರ ಪರಿಚಯ ಇಲ್ಲಿದೆ]
ರಾಜ್ಯಪಾಲರ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಸಂಸದರಾದ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
ಈ ಹಿಂದೆ ಕರ್ನಾಟಕದ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ತಮ್ಮ ಅವಧಿ ಮುಗಿದ ಹಿನ್ನಲೆಯಲ್ಲಿ ಜೂ.28 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ, ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರಿಗೆ ರಾಜ್ಯದ ಹೆಚ್ಚುವರಿ ಹೊಣೆಯನ್ನು ನೀಡಲಾಗಿತ್ತು. ಆ.26ರಂದು ವಜುಭಾಯ್ ರುಡಾಭಾಯ್ ವಾಲಾ ಅವರನ್ನು ಕರ್ನಾಟಕ ರಾಜ್ಯಪಾಲರಾಗಿ ನೇಮಕಗೊಳಿಸಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದರು.