Don't Miss!
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ಗೆ ದೇವಿಶ್ರೀ ಗುರೂಜಿ ಎಂಟ್ರಿ
ರಾಸಲೀಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಿವಾದಕ್ಕೆ ಸಿಲುಕಿದ್ದ ದಿವ್ಯ ಜ್ಯೋತಿಷ್ಯಾಲಾಯದ ದೇವಿಶ್ರೀ ಗುರೂಜಿ ಇದೀಗ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಆದರೆ ಅವರು ಕಾಳಿಮಠದ ಋಷಿಕುಮಾರ್ ಅವರ ತರಹ ಬಣ್ಣಹಚ್ಚುತ್ತಿಲ್ಲ. ಬದಲಾಗಿ ಸಿನಿಮಾ ನಿರ್ಮಾಣಕ್ಕೆ ಕೈಹಾಕಿದ್ದಾರೆ.
ತಮ್ಮ ನಿರ್ಮಾಣ ಸಂಸ್ಥೆಗೆ ದೇವಿಶ್ರೀ ಪ್ರೊಡಕ್ಷನ್ಸ್ ಎಂದು ಹೆಸರಿಟ್ಟಿದ್ದು ಈಗಾಗಲೆ ಅದನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ರು.50 ಸಾವಿರ ನಗದು ಶುಲ್ಕ ಹಾಗೂ ಕೆಲವು ದಾಖಲೆಗಳನ್ನು ಫಿಲಂ ಚೇಂಬರ್ ಗೆ ಸಲ್ಲಿಸಿದ್ದಾರೆ. [ಜ್ಯೋತಿಷಿ ರಾಮಸ್ವಾಮಿ ದೇವಿಶ್ರೀ ರಾಸಲೀಲೆ ಬಹಿರಂಗ]
ತಮ್ಮ ಚೊಚ್ಚಲ ನಿರ್ಮಾಣದ ಚಿತ್ರಕ್ಕೆ ಕೈತುತ್ತು ಎಂದು ಹೆಸರಿಟ್ಟಿದ್ದಾರೆ. ರಾಜೀವ್ ಕೃಷ್ಣ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದೆ. ಅಮ್ಮ ಮತ್ತು ಮಗುವಿನ ನಡುವಿನ ಸಂಬಂಧದ ಕಥಾಹಂದರವನ್ನು ಚಿತ್ರ ಒಳಗೊಂಡಿದೆ.
ಮಗನ ಪಾತ್ರವನ್ನು ಯಶವಂತ್ ಪೋಷಿಸಲಿದ್ದು, ತಾಯಿಯ ಪಾತ್ರಕ್ಕೆ ಸುಧಾರಾಣಿ ಅವರನ್ನು ಸಂಪರ್ಕಿಸಲಾಗಿದೆಯಂತೆ. ಆದರೆ ಸುಧಾರಾಣಿ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಪ್ರಮುಖ ಪಾತ್ರದಲ್ಲಿ ಕಿಲ್ಲರ್ ವೆಂಕಟೇಶ್ ಸಹ ಇದ್ದಾರೆ ಎನ್ನುತ್ತವೆ ಮೂಲಗಳು.