Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣೆ ಸೋತ ರಮ್ಯಾಗೆ ನಾಗತಿಹಳ್ಳಿ ಸಲಹೆ
ಜಿದ್ದಾಜಿದ್ದಿನ ಹೋರಾಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪರಾಜಯಗೊಂಡ ರಮ್ಯಾಗೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಲಹೆಯೊಂದನ್ನು ನೀಡಿದ್ದಾರೆ.
ರಮ್ಯಾ ಇನ್ನೂ ಸಿನಿಮಾದಲ್ಲಿ ನಟಿಸಬೇಕಾದವರು. ನಟನೆಯನ್ನು ಆಕೆ ಬಿಡಬಾರದು. ರಾಜಕೀಯ ಮತ್ತು ಸಿನಿಮಾ ರಂಗ ಎರಡನ್ನೂ ಬಿಡಬಾರದೆಂದು ನಾಗತಿಹಳ್ಳಿ ಹೇಳಿದ್ದಾರೆ.
ಸಿನಿಮಾ ಮತ್ತು ರಾಜಕೀಯ ರಂಗವನ್ನು ಬ್ಯಾಲನ್ಸ್ ಮಾಡಿಕೊಂಡು ಮುಂದುವರಿಯಬೇಕು. ಸೋಲು, ಗೆಲುವು ಮನುಷ್ಯನ ಬದುಕಿನಲ್ಲಿ ಸಹಜ. ಯಾವುದಕ್ಕೂ ಧೃತಿಗೆಡದೆ ಬದುಕಿನಲ್ಲಿ ಸೂಕ್ತ ಹೆಜ್ಜೆ ಇಡಬೇಕೆಂದು ನಾಗತಿಹಳ್ಳಿ, ರಮ್ಯಾಗೆ ಸಲಹೆ ನೀಡಿದ್ದಾರೆ.
ಸಿನಿಮಾ ರಂಗವೆಂದರೆ ಬಣ್ಣ ಹಚ್ಚುವುದು, ರಾಜಕೀಯ ರಂಗವೆಂದರೆ ಜನರ ಮಧ್ಯ ಇರಬೇಕಾಗಿರುವುದು. ಎರಡನ್ನೂ ಸಮದೂಗಿಸಿಕೊಂಡು ರಮ್ಯಾ ಮುಂದುವರಿಯಲಿ ಎನ್ನುವುದು ನನ್ನ ಸಲಹೆ ಎಂದಿದ್ದಾರೆ ನಾಗತಿಹಳ್ಳಿ ಚಂದ್ರಶೇಖರ್.
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸೂಪರ್ ಹಿಟ್ ಚಿತ್ರ ಅಮೃತಧಾರೆ ಚಿತ್ರದಲ್ಲಿ ರಮ್ಯಾ ಮನೋಜ್ಞ ಅಭಿನಯ ನೀಡಿದ್ದರು.
ಶಿವರಾಜ್ ಕುಮಾರ್, ರಮ್ಯಾ ಪ್ರಮುಖ ಭೂಮಿಕೆಯಲ್ಲಿರುವ ಆರ್ಯನ್ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ. ದಿಲ್ ಕಾ ರಾಜ ಮತ್ತು ಕೋಡಿರಾಮಕೃಷ್ಣ ನಿರ್ದೇಶನದ ಚಿತ್ರದಲ್ಲೂ ರಮ್ಯಾ ನಟಿಸುತ್ತಿದ್ದಾರೆ.